ಬೆಂಗಳೂರು ಕಂಬಳ ನೋಡಿ ವಾಪಾಸ್ ಆಗುತ್ತಿದ್ದ ಗೆಳೆಯರು ಅಪಘಾತಕ್ಕೆ ಬಲಿ!!

ಮಂಗಳೂರು: ಕುಣಿಗಲ್ ಹೊರವಲಯದ ಚಿಗಣಿ ಪಾಳ್ಯ ಬಳಿ ಬೋರ್ ವೆಲ್ ಲಾರಿಗೆ ಕಾರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗೆಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.


ಬಜಪೆ ಮೂಲದ ಕಿಶಾನ್ ಶೆಟ್ಟಿ(20 ) ಹಾಗೂ ಫಿಲೀಪ್ ನೇರಿ ಲೋಬೋ (32) ಮೃತರಾಗಿದ್ದು ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

error: Content is protected !!