ನಾಟೆಕಲ್ ನಲ್ಲಿ ಭೀಕರ ಅಪಘಾತ, ಹಳೆಯಂಗಡಿ-ತೋಕೂರಿನ ಮಹಿಳೆ ಸ್ಪಾಟ್ ಡೆತ್, ಯುವಕ ಗಂಭೀರ!

ಹಳೆಯಂಗಡಿ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ವಿಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.


ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ಸಾವನ್ನಪ್ಪಿದವರು. ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿದೆ.

ನಿಧಿ ಸಾವನ್ನಪ್ಪಿದ್ದು ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

error: Content is protected !!