ಮಂಗಳೂರು : ರಾಷ್ಟ್ರೀಯ ಪ್ರೋಡಕ್ಟಿವಿಟಿ ಕೌನ್ಸಿಲ್ ಹಾಗೂ ಮಂಗಳೂರು ಪ್ರೋಡಕ್ಟಿವಿಟಿ ಕೌನ್ಸಿಲ್ ಮತ್ತು ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮಂಗಳೂರು ವತಿಯಿಂದ ಬೌದ್ಧಿಕ ಆಸ್ತಿಯ ಹಕ್ಕುಗಳ ಕುರಿತಾಗಿ ಗುರುವಾರ 13 ಫೆಬ್ರವರಿ 2025 ಎ. ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಸಭಾಂಗಣದಲ್ಲಿ ಬೆಳಿಗ್ಗೆ 9.30 ಕ್ಕೆ ಒಂದು ದಿನದ ಕಾರಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಾ. ಬಿ. ಕೆ. ರವೀಂದ್ರ ನಿರ್ದೇಶಕರು ವಿವೇಕಾನಂದ ಕಾನೂನು ಕಾಲೇಜು ಪುತ್ತೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ನಂತರ ಸಹ್ಯಾದ್ರಿ ಕಾಲೇಜಿನ ಡಾ. ಅಜಿತ ಬಿ.ಎಸ್. ಮತ್ತು ಎಸ್.ಡಿ.ಎಮ್ ಕಾನೂನು ಕಾಲೇಜಿನ ಡಾ. ಚಂದ್ರಲೇಖ ವಿ. ರವರು ಬೌದ್ಧಿಕ ಆಸ್ತಿಯ ಹಕ್ಕುಗಳ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನೀಡಲಿದ್ದಾರೆ. ಅಪರಾಹ್ನ 1.30 ರಿಂದ ವಿವಿಧ ಮ್ಯಾನೇಜ್ಮೆಂಟ್ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಬೌದ್ಧಿಕ ಆಸ್ತಿಯ ಹಕ್ಕುಗಳ ಕುರಿತಾಗಿ ಚರ್ಚಾ ಸ್ಪರ್ಧೆ, ಪರಿಕಲ್ಪನಾ ಲೇಖನ ಬರವಣಿಗೆ ಸ್ಪರ್ದೆ ಮತ್ತು ಪೋಸ್ಟರ್ ಪ್ರಸ್ತುತಿಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ಆಸಕ್ತ ಸಾರ್ವಜನಿಕರು ಮತ್ತು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಈ ಕಾರ್ಯಗಾರ ಮತ್ತು ಸ್ಪರ್ಧಾಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ. ಈ ಕಾರ್ಯಗ್ರಹಕ್ಕೆ ಭಾಗವಹಿಸುವವರಿಗೆ ೫೦೦ ರೂ ಶುಲ್ಕ ನಿಗದಿಪಡಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರೋಡಕ್ಟಿವಿಟಿ ಕೌನ್ಸಿಲ್ನ ಅಧ್ಯಕ್ಷ ಯು.ರಾಮ ರಾವ್ ರವರು ಮತ್ತು ಎ. ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೀಜಿನ ನಿರ್ದೇಶಕರಾದ ಡಾ.ಟಿ. ಜಯಪ್ರಕಾಶ್ ರಾವ್ ಕಾರ್ಯಕ್ರಮದ ಸಂಯೋಜಕರಾದ ಪ್ರೋ. ಮಹೇಶ್ ಪಿ.ಜಿ ಯವರು,ಡಾ..ಚೇತನ್ ಕುಮಾರ್,ಡಾ. ಸ್ವಪ್ನ ಶೆಟ್ಟಿ ಯವರು ಉಪಸ್ಥಿತರಿದ್ದರು.