ರೈಲು ಹಳಿಯ ಕಬ್ಬಿಣ ಕದ್ದರೆಂದು ಬಾಲಕರಿಗೆ ಹಲ್ಲೆಗೈದ ರೈಲ್ವೇ ಗ್ಯಾಂಗ್ ಮೆನ್ ಮೇಲೆ ಕೇಸ್!

ಮೂಲ್ಕಿ: ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ಆಟ ಆಡುತ್ತ ರೈಲು ಹಳಿಯ ಬಳಿ ದೊರೆತ ಕಬ್ಬಿಣದ ತುಂಡನ್ನು ಹೆಕ್ಕಿದ್ದರು ಎನ್ನಲಾಗಿದೆ.

ಇದನ್ನು ನೋಡಿದ ಗ್ಯಾಂಗ್‌ಮ್ಯಾನ್ ಕೋಲಿನಿಂದ ಒಬ್ಬನ ತಲೆಗೆ ಹಾಗೂ ಮತ್ತೋರ್ವನ ಕಾಲಿಗೆ ಹೊಡೆದಿದ್ದಾನೆ. ಘಟನೆಯ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಎನ್ನಲಾಗಿದೆ.

error: Content is protected !!