ಹೆಂಡತಿ ಮನೆ ಬಿಟ್ಟು ಹೋದ ಸಿಟ್ಟಿನಲ್ಲಿ ಅತ್ತೆ, ನಾದಿನಿ, ಮಗುವನ್ನು ಕೊಂದ ಪಾಪಿ ಆತ್ಮಹತ್ಯೆಗೆ ಶರಣು!

ಹೆಂಡತಿ ಮನೆ ಬಿಟ್ಟು ಹೋದ ಸಿಟ್ಟಿನಲ್ಲಿ ಅತ್ತೆ, ನಾದಿನಿ, ಮಗುವನ್ನು ಕೊಂದ ಪಾಪಿ ಆತ್ಮಹತ್ಯೆಗೆ ಶರಣು!

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋದ ಸಿಟ್ಟಿನಲ್ಲಿ ವ್ಯಕ್ತಿಯೋರ್ವ ಮನೆಗೆ ಬಂದಿದ್ದ ತನ್ನ ಅತ್ತೆ, ನಾದಿನಿ ಹಾಗೂ ಮಗುವನ್ನು ಬಂದೂಕಿನಿಂದ ಗುಂಡು ಹಾರಿಸಿ ಭೀಕರವಾಗಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಭೀಭತ್ಸ ಘಟನೆ ಮಂಗಳವಾರ ರಾತ್ರಿ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಸಂಭವಿಸಿದೆ. ರತ್ನಾಕರ್‌ ಎಂಬಾತ ಈ ಕೃತ್ಯ ಎಸಗಿದ ಮಹಾಪಾಪಿ.

ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು ಖುಷಿ ರತ್ನಾಕರ್​ನ ಅಟ್ಟಹಾಸಕ್ಕೆ ಅನ್ಯಾಯವಾಗಿ ಪ್ರಾಣಕಳೆದುಕೊಂಡ ದುರ್ದೈವಿಗಳು. ಮೃತ ಸಿಂಧು ಅವರ ಪತಿ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದೆ. ರತ್ನಾಕರ್‌ ನಾಡ ಬಂದೂಕಿನಿಂದ ಮೂವರನ್ನು ಹತ್ಯೆ ಮಾಡಿ, ಆನಂತ ತೋಟಕ್ಕೆ ತೆರಳಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಲಹ ಇವರ ಮಧ್ಯೆ ನಡೆಯುತ್ತಿತ್ತು. ಇದರಿಂದ ಬೇಸತ್ತು ರತ್ನಾಕರ್, ಈ ಕೃತ್ಯ ಎಸಗಿದ್ದಾಗಿ ಎಸ್​ಪಿ ವಿಕ್ರಮ್​ ಆಮಟೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ ಪ್ರಕರಣ ದಾಖಲಿಸಿದ್ದಾರೆ

ರತ್ನಾಕರ್‌ ಸಿಟ್ಟಿಗೆ ಕಾರಣ ಹೆಂಡತಿ
ರತ್ನಾಕರ್‌ ಪತ್ನಿ ಮನೆ ಬಿಟ್ಟು ಹೋಗಿದ್ದರಿಂದ ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಅಪ್ಪ ರತ್ನಾಕರ್ ಬಳಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ ಎಂಬ ಮಾಹಿತಿ ಲಭಿಸಿದೆ.

error: Content is protected !!