ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ.
ಇಂದು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.