ವಿಜಯಪುರ ಭೀಕರ ಅಪಘಾತಕ್ಕೆ ಯೋಧ ಸಹಿತ ಇಬ್ಬರು ದಾರುಣ ಮೃ*ತ್ಯು

ವಿಜಯಪುರ: ಸರಣಿ ರಸ್ತೆ ಅಪಘಾತದಲ್ಲಿ ಬಿಎಸ್‌ಎಫ್ ಯೋಧ ಮತ್ತು ಆಂಬ್ಯುಲೆನ್ಸ್ ಚಾಲಕ ಮೃತಪಟ್ಟ ಘಟನೆ ನಿಡಗುಂದಿ ಪಟ್ಟಣದ ಬಳಿ ಬುಧವಾರ ನಡೆದಿದೆ. ಮೃತರನ್ನು ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್‌ಎಫ್ ಯೋಧ ಮೌನೇಶ ರಾಠೋಡ್ , ಕೇರಳ ಮೂಲದ ಆಂಬ್ಯುಲೆನ್ಸ್ ಚಾಲಕ ರಿತೇಶ್‌ ಎಂದು ಗುರುತಿಸಲಾಗಿದೆ.

ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಯೋಧ ಮೌನೇಶ ಮೃತಪಟ್ಟಿದ್ದಾರೆ. ನಂತರ ಮುಂದೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದಿದ್ದು ಅದರ ಚಾಲಕ ರಿತೇಶ್‌ ಮೃತಪಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!