ವೇಣೂರು ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ!

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ತಡರಾತ್ರಿ ನಡೆದಿದೆ.

ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!