ಬೆಂಗಳೂರು: ರಾಜ್ಯದ ಹಲವೆಡೆ ಏಪ್ರಿಲ್ 15ರಿಂದ 20ರವರೆಗೂ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗುವುದಾಗಿ ಹವಾಮಾನ ಇಲಾಖೆ ಹೇಳಿದೆ. ಚಿಕ್ಕಮಗಳೂರಿನಲ್ಲಿ ನಿನ್ನೆ ಆಲಿಕಲ್ಲು ಮಳೆಯಾಗಿದ್ದು, ಕೊಡಗಿನ ಹಲವೆಡೆ ಗಾಳಿಯೊಂದಿಗೆ ಮಳೆಯಾಗಿ ಹಸುಗಳು ಸಾವನ್ನಪ್ಪಿವೆ.
ಇಂದು ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರ ಸೇರಿದಂತೆ ಹಲವೆಡೆ ಸಾಧಾರಣದಿಂದ ಧಾರಾಕಾರ ಮಳೆಯಾಗುವ ಸೂಚನೆ ನೀಡಲಾಗಿದೆ.ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಈ ಒಂದು ವಾರದಲ್ಲಿ ಕರಾವಳಿ ಭಾಗಗಳು, ಉತ್ತರ ಕನ್ನಡ ಭಾಗದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೀದರ್, ಯಾಗದಿರಿ, ವಿಜಯಪುರ, ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಮಿಂಚು ಗಾಳಿ ಸಮೇತ ಮಳೆಯಾಗಲಿದೆ. ಅಲ್ಲದೆ ಶಿವಮೊಗ್ಗ, ಚಾಮರಾಜನಗ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು, ರಾಮನಗರ ಮತ್ತಿತರೆಡೆ ಮಳೆಯಾಗುವ ನಿರೀಕ್ಷೆಯಿದೆ.