ತೆಲಂಗಾನ: ಋತುಚಕ್ರದ ಬಗ್ಗೆ ಸೌತ್ ಬ್ಯೂಟಿ ಕ್ವೀನ್ ಸಮಂತಾ ಓಪನ್ ಆಗಿ ಮಾತಾಡಿದ್ದು, ಈಕೆಯ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಮಹಿಳೆಯರ ಪೀರಿಯಡ್ಸ್ ಬಗ್ಗೆ ಸಂದರ್ಶನವೊಂದರಲ್ಲಿ ನಟಿ ಮುಕ್ತವಾಗಿ ಮಾತನಾಡಿದ್ದಾರೆ.
ಕಾಲ ಬದಲಾಗಿದೆ. ಮಹಿಳೆಯರು ಇಲ್ಲಿಯವರೆಗೆ ಬಂದಿದ್ದೇವೆ. ಆದರೂ ಪೀರಿಯಡ್ಸ್ ಬಗ್ಗೆ ಮಾತನಾಡಲು ಹಿಂಜರಿಯುತ್ತೇವೆ. ಇದರ ಬಗ್ಗೆ ಮಾತನಾಡೋದು, ಅವಮಾನ ಎಂದು ಭಾವಿಸುತ್ತೇವೆ. ಈ ಮನಸ್ಥಿತಿ ಬದಲಾಗಬೇಕು. ಋತುಚಕ್ರದ ಬಗ್ಗೆ ಮುಕ್ತವಾಗಿ ಹಂಚಿಕೊಳ್ಳಬೇಕು ಎಂದಿದ್ದಾರೆ.
ಋತುಚಕ್ರ ಮುಜುಗರ ಅಥವಾ ಹಗುರವಾಗಿ ಪರಿಗಣಿಸುವ ವಿಚಾರವಲ್ಲ. ಇದು ನಮ್ಮ ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಪ್ರತಿ ವರ್ಷವೂ ನಿರಂತರವಾಗಿ ಕಲಿಯುತ್ತಲೇ ಇರುತ್ತೇವೆ ಎಂದು ನಟಿ ಮಾತನಾಡಿದ್ದಾರೆ.
ಅಂದಹಾಗೆ, ಅಲ್ಲು ಅರ್ಜುನ್ ಮತ್ತು ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಸಮಂತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್ಡೇಟ್ ಸಿಗಲಿದೆಯಾ ಎಂಬುದನ್ನು ಕಾದುನೋಡಬೇಕಿದೆಸಮಂತಾ ನಟನೆಯ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಅವರ ನಿರ್ಮಾಣದ ‘ಶುಭಂ’ ಸಿನಿಮಾ ರಿಲೀಸ್ ರೆಡಿಯಿದೆ.