ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ನಿನ್ನೆ ನಡೆದ ಉಗ್ರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದು, ಇದೀಗ ಮತ್ತಿಬ್ಬರು ಕನ್ನಡಿಗರು ಮತೃರಾಗಿದ್ದಾರೆ. ಬೆಂಗಳೂರಿನ ನಿವಾಸಿ ಭರತ್ ಭೂಷಣ್, ಮಧುಸೂಧನ್ ಎನ್ನುವರು ಸಹ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಭರತ್ ಭೂಷಣ್ ಅವರು ತಮ್ಮ ಪತ್ನಿ ಸುಜಾತ ಮತ್ತು ಮೂರು ವರ್ಷದ ಮಗನ ಜೊತೆಗೆ ಕಾಶ್ಮೀರಕ್ಕೆ ಹೋಗಿದ್ದರು. ಮಗು ಮತ್ತು ಸುಜಾತರಿಗೆ ಏನೂ ತೊಂದರೆಯಾಗಿಲ್ಲ.
ಪಹಲ್ಗಾಮ್ನಲ್ಲಿ ಟಿಆರ್ಎಫ್ ಉಗ್ರರ ದಾಳಿಯಲ್ಲಿ ಮೂವರು ಕನ್ನಡಿಗರು ಮೃತಪಟ್ಟಂತಾಗಿದೆ. ಈಗಾಗಲೇ ಕರ್ನಾಟಕದಿಂದ ಅಧಿಕಾರಿಗಳು ಹಾಗೂ ಪೊಲೀಸರು ಸಹ ಕಾಶ್ಮೀರದತ್ತ ಹೊರಟ್ಟಿದ್ದಾರೆ. ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಏಪ್ರಿಲ್ 22ರಂದು ನಡೆದ ಉಗ್ರರ ದಾಳಿಯಲ್ಲಿ ಸುಮಾರು 27 ಮಂದಿ ಸಾವಿಗೀಡಾಗಿದ್ದು, ಅವರಲ್ಲಿ ಮೂವರು ಕನ್ನಡಿಗರು ಸಹ ಮೃತಪಟ್ಟಿದ್ದಾರೆ. ಭರತ್ ಭೂಷಣ್ ಅವರು ಮೃತಪಟ್ಟಿರುವುದು ನಿನ್ನೆ ರಾತ್ರಿ 9 ರ ಸುಮಾರಿಗೆ ತಿಳಿದುಬಂದಿದೆ. ಭರತ್ ಭೂಷಣ್ ಅವರು ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಕೋಳಿವಾಡ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರು.