ಯಾದಗಿರಿ: ಜಮ್ಮು-ಕಾಶ್ಮೀರದ ಪಹಲ್ಘಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ ಯಾದಗಿರಿ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು ಕಾಶ್ಮೀರದಲ್ಲಿ ಯಾದಗಿರಿ ಪ್ರವಾಸಿಗರು ಸೇಫ್ ಆಗಿದ್ದಾರೆ ಎಂದು ಯಾದಗಿರಿ ಮೂಲದ ಉದ್ಯಮಿ ಪ್ರಭಾಕರ್ ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.
ಯಾದಗಿರಿಯ ನಾಲ್ವರು ಉಗ್ರರ ದಾಳಿಯಿಂದ ಬದುಕುಳಿದಿದ್ದು, ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ರಂಗಂಪೇಟೆ ನಿವಾಸಿಗಳಾದ ಪ್ರಭಾಕರ್ ಹಾಗೂ ಮಹೇಶ್ವರಿ ದಂಪತಿ ಸೇರಿ ಇಬ್ಬರು ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಗುಂಡಿನ ದಾಳಿ ಸದ್ದಿಗೆ ಭಯಭೀತಗೊಂಡು ಸ್ಥಳದಿಂದ ಓಡಿ ಹೋಗಿ ಬಚಾವ್ ಆಗಿದ್ದಾರೆ. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯಮಿಯಾಗಿರುವ ಪ್ರಭಾಕರ್ ಜುಜಾರೆ ಬೇಸಿಗೆ ರಜೆ ಹಿನ್ನೆಲೆ ಕುಟುಂಬ ಸಮೇತ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾ*ಳಿ ಸ್ಥಳದಿಂದ ನೂರು ಮೀಟರ್ ಅಂತರದಲ್ಲಿ ಇದ್ದ ಯಾದಗಿರಿ ಮೂಲದ ದಂಪತಿಗಳೊಟ್ಟಿಗೆ ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಏಳು ಕಿಲೋಮೀಟರ್ ದೂರ ಬಂದಿದ್ದೇವೆ ಎಂದು ವಿಡಿಯೋ ಮೂಲಕ ಘಟನೆ ವಿವರ ಹಂಚಿಕೊಂಡಿದ್ದಾರೆ.
ಘಟನಾ ಸ್ಥಳದಿಂದ ಏಳು ಕಿಲೋಮೀಟರ್ ದೂರ ಬಂದು ಲಾಡ್ಜ್ ನಲ್ಲಿ ಉಳಿದುಕೊಂಡಿದ್ದೇವೆ. ಸದ್ಯ ಸೇಫ್ ಆಗಿದ್ದು , ಈಗ ಶ್ರೀನಗರ ಕಡೆಗೆ ಹೊರಟ್ಟಿದ್ದೇವೆ. ಸರ್ಕಾರ ಏರ್ ಲಿಪ್ಟ್ ಮಾಡಿದರೇ ಬೆಂಗಳೂರಿಗೆ ಬರೋಕೆ ಅನುಕೂಲ ಆಗುತ್ತದೆ ಎಂದು ಪ್ರಭಾಕರ್ ಹೇಳಿದ್ದಾರೆ.