ಅಹಮದಾಬಾದ್: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕಿಸ್ತಾನಿಯರನ್ನ ವಾಪಸ್ ಕಳುಹಿಸುವ ಕಾರ್ಯಾಚರಣೆಯನ್ನು ಸರ್ಕಾರಗಳು ಚುರುಕುಗೊಳಿಸಿವೆ. ಈ ನಡುವೆ ವಿವಿಧ ದೇಶಗಳಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.
ಅದರಂತೆ ಅಹಮದಾಬಾದ್ ಮತ್ತು ಸೂರತ್ನಲ್ಲಿ ನಡೆದ ಶೋಧ ಕಾರ್ಯಾಚರಣೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ. ಗುಜರಾತ್ ಪೊಲೀಸರು ಇಲ್ಲಿಯವರೆಗೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು, ಬಂಧಿತರನ್ನ ಶೀಘ್ರವೇ ಗಡೀಪಾರು ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ತಿಳಿಸಿದ್ದಾರೆ.
ಅಹಮದಾಬಾದ್ನಲ್ಲಿ ಕನಿಷ್ಠ 890 ಮತ್ತು ಸೂರತ್ನಲ್ಲಿ 134 ಬಾಂಗ್ಲಾದೇಶಿಗರನ್ನ ಬಂಧಿಸಲಾಗಿದೆ. ಬಂಧಿತರು ಗುಜರಾತ್ಗೆ ಬರುವ ಮುನ್ನ ಭಾರತದ ವಿವಿಧ ಭಾಗಗಳಲ್ಲಿ ಉಳಿಯಲು ಪಶ್ಚಿಮ ಬಂಗಾಳದಿಂದ ಪಡೆದ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಸಹ ಸಚಿವರು ಮಾಹಿತಿ ನೀಡಿದ್ದಾರೆ.
ಗುಜರಾತ್ನಲ್ಲಿ ವಾಸಿಸುವ ಅಕ್ರಮ ವಲಸಿಗರು ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ಶರಣಾಗಬೇಕು, ಇಲ್ಲದಿದ್ದರೆ ಅವರನ್ನು ಬಂಧಿಸಿ ಗಡೀಪಾರು ಮಾಡಲಾಗುವುದು ಎಚ್ಚರಿಕೆ ಸಹ ನೀಡಿದ್ದಾರೆ.