ಬುಲಂದ್ಶಹರ್: ದುಷ್ಕರ್ಮಿಗಳ ಗುಂಪೊಂದು ಮಹಿಳೆಯನ್ನು ಚಲಿಸುತ್ತಿದ್ದ ಕಾರಿನಿಂದ ದೂಡಿ ಕೊಲೆ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಲಂದ್ಶಹರ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಂದೀಪ್, ಅಮಿತ್ ಮತ್ತು ಗಾಜಿಯಾಬಾದ್ ನಿವಾಸಿ ಗೌರವ್ ಬಂಧಿತ ಆರೋಪಿಗಳು.
ಮಂಗಳವಾರ ಸಂಜೆ ಆರೋಪಿಯು ಕೆಲಸ ಕೊಡಿಸುವ ಭರವಸೆ ನೀಡಿ ಮಹಿಳೆ ಮತ್ತು ಅಪ್ರಾಪ್ತೆಯನ್ನು ಗ್ರೇಟರ್ ನೋಯ್ಡಾದಿಂದ ಲಕ್ನೋಗೆ ಕರೆದುಕೊಂಡು ಹೋಗಿದ್ದ. ಆರೋಪಿಗಳು ಕಾರಿನಲ್ಲೇ ಮದ್ಯಪಾನ ಮಾಡಿ ಅಪ್ರಾಪ್ತೆ ಹಾಗೂ ಮಹಿಳೆಯೊಂದಿಗೆ ಜಗಳ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಮೀರತ್ ಜಿಲ್ಲೆಯಲ್ಲಿ ಮಹಿಳೆಯನ್ನು ಕಾರಿನಿಂದ ಹೊರಗೆ ತಳ್ಳಿದ್ದು, ಆಕೆ ಸಾವನ್ನಪ್ಪಿದ್ದಾಳೆ.
ಬಳಿಕ ಕಾರಿನಲ್ಲಿದ್ದ ಅಪ್ರಾಪ್ತೆ ಮೇಲೆ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ. ಮೀರತ್ನಿಂದ ಸುಮಾರು 100 ಕಿಲೋಮೀಟರ್ ಮುಂದಿರುವ ಬುಲಂದ್ಶಹರ್ ಜಿಲ್ಲೆಯ ಖುರ್ಜಾ ಸುತ್ತಮುತ್ತ ಇರುವಾಗ ಆಕೆ ಅವರಿಂದ ತಪ್ಪಿಸಿಕೊಂಡಿದ್ದಾಳೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಆರೋಪಿಗಳ ಕಿಯಾ ಸೆಲ್ಟೋಸ್ ಕಾರನ್ನು ಅಲಿಘರ್-ಬುಲಂದ್ಶಹರ್ ಹೆದ್ದಾರಿ ಬಳಿ ತಡೆದು, ಗೌರವ್ ಮತ್ತು ಸಂದೀಪ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಬುಲಂದ್ಶಹರ್ ಎಸ್ಎಸ್ಪಿ ದಿನೇಶ್ ಕುಮಾರ್ ಸಿಂಗ್ ಅವರ ಪ್ರಕಾರ, ಎರಡು ಅಕ್ರಮ ಪಿಸ್ತೂಲ್ಗಳು, ಜೀವಂತ ಮತ್ತು ಖಾಲಿ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ ಖುರ್ಜಾ ಪೊಲೀಸ್ ಠಾಣೆಯಲ್ಲಿ ಭಾರತ್ ನ್ಯಾಯ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.