ಕೋಮುದ್ವೇಷ ಭಾಷಣ ಆರೋಪ: ಭರತ್‌ ಕುಮ್ಡೇಲ್‌ ಮೇಲೆ ಕೇಸ್

ಮಂಗಳೂರು: ಕೋಮುದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಹಿಂದೂ ಸಂಘಟನೆಯ ಮುಖಂಡ ಭರತ್‌ ಕುಮ್ಡೇಲ್‌ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.


ಭರತ್‌ ಕುಮ್ಡೇಲು 5-05-2025 ರಂದು ಸಂಜೆ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬೈಪಾಸ್‌ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣವನ್ನು ಮಾಡಿರುವುದಾಗಿದೆ. ಇಂತಹ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 35/2025 ಕಲಂ-196, 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

error: Content is protected !!