ಬೆಂಗಳೂರು: ಕ್ಯಾಬ್ ಚಾಲಕನಾಗಿದ್ದ ಯುವಕನೊಬ್ಬ ನಿಂತಿದ್ದ ಜಾಗದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಅಭಿಷೇಕ್ (19) ಎಂದು ಗುರುತಿಸಲಾಗಿದೆ.
ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದ. ಆತನನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.