ಹಾಸನ: ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು!

ಹಾಸನ: ಇಲ್ಲಿನ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಮದುವೆ ಸಮಾರಂಭದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ತನಗೆ ಮದುವೆಯೇ ಬೇಡ ಎಂದು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡ ಘಟನೆ ನಡೆದಿದೆ. ಪ್ರೇಮ ಪ್ರಕರಣ ಇದಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಯುವತಿಯ ಮದುವೆ ಆಲೂರು ನಿವಾಸಿ ಯುವಕನೊಂದಿಗೆ ಇಂದು ನಿಶ್ಚಯವಾಗಿತ್ತು. ತಾಳಿ ಕಟ್ಟುವ ಘಳಿಗೆ ಸಮೀಪಿಸುತ್ತಿದ್ದಂತೆ ಯುವತಿಗೆ ಫೋನ್ ಕರೆ ಬಂದಿದ್ದು ಬಳಿಕ ಯುವತಿ ‘ನನಗೆ ಈ ಮದುವೆ ಬೇಡ’ ಎಂದು ರೂಮಿಗೆ ಹೋಗಿ ಲಾಕ್ ಮಾಡಿಕೊಂಡಿದ್ದಾಳೆ. ವರ ಕೂಡ ನನಗೂ ಈ ಮದುವೆ ಬೇಡ ಎಂದಿದ್ದಾನೆ. ಘಟನೆಯಿಂದ ಮದುವೆಗೆ ಆಗಮಿಸಿದ್ದ ಬಂಧು ಮಿತ್ರರು ಗೊಂದಲಕ್ಕೆ ಈಡಾಗಿದ್ದಾರೆ.

error: Content is protected !!