ಮಂಗಳೂರು : ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಮತ್ತಷ್ಟು ಜೋರಾಗಿದ್ದು, ಮಂಗಳೂರು ನಗರದ ಹಲವೆಡೆ ಅನಾಹುತಗಳು ಸಂಭವಿಸಿದೆ.
ಮಂಗಳೂರಿನ ಬಿಜೈ ಕಾಫಿಕಾಡಿನಲ್ಲಿ ಇಂದು ಮುಂಜಾನೆ ಬೃಹತ್ ಮರ ಒಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹೊರವಲಯ ತೊಕ್ಕೊಟ್ಟು ಭಾಗದಲ್ಲಿ ರಸ್ತೆಯಲ್ಲಿಯೇ ನೀರು ನಿಂತಿದ್ದು, ಅಲ್ಲೂ ಸಂಚಾರಕ್ಕೆ ಅಡ್ಡಿಯಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕೂಡಾ ಅಪಾರ ಹಾನಿ ನಷ್ಟ ಉಂಟಾಗಿದೆ. ದೇರಳಕಟ್ಟೆಯ ಬೆಳ್ಮ ಗ್ರಾಮದಲ್ಲಿ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.