ರಸ್ತೆಯಲ್ಲಿ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋದ ಡ್ರೈವರ್: ಓರ್ವ ಸಾವು, ಇನ್ನೋರ್ವ ಗಂಭೀರ

ವಿಟ್ಲ: ನಿಲ್ಲಿಸಿದ್ದ ಮಣ್ಣಿನ ಲಾರಿಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವು ಎಂಬಲ್ಲಿ ಮೇ 30ರ ಶುಕ್ರವಾರ ನಡೆದಿದೆ. ಲಾರಿ ಚಾಲಕ ಬೇಜಾಬ್ದಾರಿಯಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಒಕ್ಕೆತ್ತೂರು ಮೂಲದ ಇರ್ಫಾನ್ (19) ಮೃತ ದುರ್ದೈವಿ. ಸಹಸವಾರ ಫಾರಿಸ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಬ್ಬರು ಮಂಗಳಪದವು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದ. ಭಾರೀ ಮಳೆಯಿಂದಾಗಿ ರಸ್ತೆ ಮಸುಕಾಗಿದ್ದರಿಂದ ಬೈಕ್‌ ಸವಾರರಿಗೆ ನಿಲ್ಲಿಸಿದ್ದ ಲಾರಿ ಕಾಣಿಸದೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

error: Content is protected !!