ಬಂಟ್ವಾಳ : ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಹಂತಕರಿಂದ ಹತ್ಯೆಗೀಡಾಗಿದ್ದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಇನಾಯತ್ ಅಲಿ ಅವರು ವೈಯ್ಯಕ್ತಿಕವಾಗಿ 5ಲಕ್ಷ ರೂ. ಪರಿಹಾರ ಧನವಾಗಿ ರಹಿಮಾನ್ ಅವರ ತಂದೆಗೆ ಹಸ್ತಾಂತರಿಸಿದರು. ಜೊತೆಗೆ ಅವರ ಇಬ್ಬರೂ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ತಾನೇ ವಹಿಸಿಕೊಳ್ಳುವೆನೆಂದು ಆಶ್ವಾಸನೆ ನೀಡಿದರು.