ಕಡಬ: ಕಡಬ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರು ಫೋಟೋ ತೆಗೆಯಲು ಹೋದ ಕಾರಣಕ್ಕೆ ಕಡಬ ಪೊಲೀಸ್ ಠಾಣೆಯ ಮುಂದೆ ಎದುರು ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಲವು ಮಂದಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಮುಂಜಾಗ್ರತಾ ಕ್ರಮವನ್ನು ವಿರೋಧಿಸಿ, ಜೂ.1ರ ರಾತ್ರಿ ಕಡಬ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಪ್ರಮೋದ್ ರೈ, ನಂದುಗುರಿ, ತಿಲಕ್, ನಂದುಗುರಿ, ಮೋಹನ, ಕೆರೆಕೋಡಿ, ಚಂದ್ರಶೇಖರ, ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್, ನೂಜಿಬಾಳ್ತಿಲ, ರಾದಾಕೃಷ್ಣ ಕೆ., ಜಯಂತ್ ಮತ್ತು ಇತರ ಮೂವರು ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 39/2025 ಕಲಂ: 189(2),190 BNS-2023 ರಂತೆ ಪ್ರಕರಣ ದಾಖಲಾಗಿದೆ.