ಕೋಮು ಸಂಘಟನೆಗಳ ಮುಖಂಡರ ಲಿಸ್ಟ್‌ ರೆಡಿ, ಅವರ ಮೇಲೆ ತೀವ್ರ ನಿಗಾ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್

ಮಂಗಳೂರು: ಸುಮಾರು ಹತ್ತು ವರ್ಷಗಳ ಕೊಲೆ ಪ್ರಕರಣಗಳನ್ನು ಅನಲೈಸ್‌(ವಿಶ್ಲೇಷಣೆ) ಮಾಡಿದಾಗ ಕೊಲೆ ಆರೋಪಿಗಳು ಕೋಮು ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೋಮು ಸಂಘಟನೆಗಳ ಮುಖಂಡರ ಲಿಸ್ಟ್‌ ರೆಡಿ ಮಾಡಲಾಗಿದ್ದು, ಅವರ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸುವ ನಿಟ್ಟಿನಲ್ಲಿ ತಾವು ತೆಗೆದುಕೊಂಡ ಕ್ರಮಗಳ ಕುರಿತು ವಿಡಿಯೊ ಸಂದೇಶ ಹಂಚಿಕೊಂಡ ಅವರು, ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ ಸುಮಾರು 10 ವರ್ಷಗಳ ಕೊಲೆ ಪ್ರಕರಣಗಳನ್ನು ಅನಲೈಸ್‌ ಮಾಡಿದಾಗ ಕೊಲೆ ಆರೋಪಿಗಳು ಕೋಮು ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವುದು ಕಂಡು ಬಂದಿದೆ. ಇದಕ್ಕಾಗಿ ಮತೀಯ ಸಂಘಟನೆಗಳ ಮುಖಂಡರ ಪ್ರತಿದಿನದ ಲೊಕೇಷನ್‌ ಹಾಗೂ ಅವರ ಚಟುಟಿಕೆಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೋಮು ಸಂಘಟನೆಯ ಮುಖಂಡರ ಪಟ್ಟಿಯಲ್ಲಿ ಈಗಾಗಲೇ ರೆಡಿ ಮಾಡಲಾಗಿದ್ದು, ಅವರ ಮೇಲೆ ತೀವ್ರ ನಿಗಾ ಇರಿಸಿ  ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಡಬ ಪೊಲೀಸ್‌ ಠಾಣೆಯ ಮುಂಭಾ ಪ್ರತಿಭಟನೆ ನಡೆಸಿದ ಹಿಂದೂ ಮುಖಂಡರ ಮೇಲೆ ಕ್ರಮ ಕೈಗೊಂಡ ಕ್ರಮದ ಬಗ್ಗೆ ವಿವರಿಸಿದ ಅವರು. ಭಾನುವಾರ ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆ ಎದುರು ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಅವರ ಪವಿರುದ್ಧ ಕಡಬ ಠಾಣೆಯಲ್ಲಿ 189(2) 180 ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು. ಪೊಲೀಸರು ನಡೆಸುತ್ತಿರುವ ಪ್ರತಿಬಂಧಕ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಹಜ ಸ್ಥಿತಿಗೆ ಮರಳಿಸುವುದಕ್ಕಾಗಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.

ಮತ್ತೊಂದು ವಿಡಿಯೋದಕಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ಮಾಹಿತಿ ನೀಡಿ, ಮೇ 12ರಂದು ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವುದರಿಂದ ಅವರ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ಸ್ಪಷ್ಟನೆ ನೀಡಿದರು.

error: Content is protected !!