ಹಾವು ಕಡಿದು ನವವಿವಾಹಿತ ಬಲಿ

ಬಂಟ್ವಾಳ: ಪಾಂಡವರಕಲ್ಲು ಎಂಬಲ್ಲಿ ಹಾವು ಕಡಿದು ನವ ವಿವಾಹಿತ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ.


ಮೃತಪಟ್ಟ ನವವಿವಾಹಿತನನ್ನು ಅಶ್ರಫ್ ಪಾದೆ(29) ಎಂದು ಗುರುತಿಸಲಾಗಿದೆ.ಅಶ್ರಫ್ ರವರು ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.

ಅಡಿಕೆ ಸುಳಿಯುವ ಕೆಲಸಕ್ಕೆಂದು ಹೋದಾಗ ಗೋಣಿಯ ಬದಿಯಲ್ಲಿದ್ದ ನಾಗರ ಹಾವು ಅಶ್ರಫ್ ರವರಿಗೆ ಕಚ್ಚಿದ್ದು ತಕ್ಷಣವೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!