ಬಜ್ಪೆ: ಇತ್ತೀಚೆಗೆ ಬಜ್ಪೆಯ ಪೊರ್ಕೋಡಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಗರಗಸ ಮಾದರಿಯ ಮಾರಕಾಸ್ತ್ರ ಪ್ರದರ್ಶನ ಮಾಡಿದ್ದ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪೈಕಿ ಒಬ್ಬಾತ ಅಪ್ರಾಪ್ತ ಎಂದು ತಿಳಿದುಬಂದಿದೆ.
ಪೊರ್ಕೋಡಿ ಗ್ರಾಮದ ಅಂಬೇಡ್ಕರ್ ಕಾಲನಿ ನಿವಾಸಿಗಳಾದ ಅಶ್ವತ್, ರವಿಶಂಕರ್ ಹಾಗೂ ಓರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಆರೋಪಿಗಳು ಪೊರ್ಕೋಡಿ ಮಾದರಿಯ ಮಾರಕಾಯುಧವೊಂದನ್ನು ಪ್ರದರ್ಶಿಸುತ್ತಾ ಸುತ್ತಾಡುತ್ತಿದ್ದು ಇದರ ವಿಡಿಯೋ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಇತ್ತೀಚೆಗೆ ಅದು ವೈರಲ್ ಆಗಿತ್ತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆಗಿಳಿದ ಬಜ್ಪೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಗರಗಸ ಮಾದರಿಯ ಮಾರಕಾಸ್ತ್ರ, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.