ಬೆಂಗಳೂರು: ಆರ್‌ ಸಿಬಿ ಸಂಭ್ರಮಾಚರಣೆಯಲ್ಲಿ ಭಾರೀ ದುರಂತ, ಕಾಲ್ತುಳಿತಕ್ಕೆ 4 ಮಂದಿ ಬಲಿ, 20ಕ್ಕೂ ಹೆಚ್ಚು ಮಂದಿ ಗಂಭೀರ!

ಬೆಂಗಳೂರು: ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಇದೀಗ ಭಾರೀ ದುರಂತ ಸಂಭವಿಸಿರುವ ವರದಿಯಾಗಿದೆ. ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ತಮ್ಮ ಇಷ್ಟದ ಕ್ರಿಕೆಟಿಗರನ್ನು ನೋಡಲು ನೆರೆದಿದ್ದು ಈ ವೇಳೆ ಗೇಟ್‌ ಕುಸಿದು ಕಾಲ್ತುಳಿತ ಸಂಭವಿಸಿದ್ದು ಅದರಲ್ಲಿ ಕನಿಷ್ಟ ನಾಲ್ವರು ಬಲಿಯಾಗಿದ್ದು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ವರದಿಯಾಗಿದೆ. ಸದ್ಯ ಜನರನ್ನು ಬೆಂಗಳೂರು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭ ಈ ದುರಂತ ಸಂಭವಿಸಿದೆ. ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್‌ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ. ವಿಜಯೋತ್ಸವ ಸಂದರ್ಭದಲ್ಲಿ ತೆರೆದ ಬಸ್‌ನಲ್ಲಿ ಮೆರವಣಿಗೆಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿತ್ತು. ಕಾನೂನು ಹಾಗೂ ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಹೇಳಲಾಗಿತ್ತು. ಆದರೂ ದುರ್ಘಟನೆ ಘಟಿಸಿದೆ.

error: Content is protected !!