ಬೆಂಗಳೂರು: ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ತಮ್ಮ ಇಷ್ಟದ ಕ್ರಿಕೆಟಿಗರನ್ನು ನೋಡಲು ನೆರೆದಿದ್ದು ಈ ವೇಳೆ ಗೇಟ್ ಕುಸಿದು ಕಾಲ್ತುಳಿತ ಸಂಭವಿಸಿದ್ದು ಅದರಲ್ಲಿ 10 ಮಂದಿ ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 50ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ವರದಿಯಾಗಿದೆ.
ಆರ್ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭ ಈ ದುರಂತ ಸಂಭವಿಸಿದೆ. ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.