ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ, ಖಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಗಡಿಪಾರು ಲಿಸ್ಟಲ್ಲಿರುವ ಬಂಟ್ವಾಳ ನಿವಾಸಿ ಭರತ್ ಕುಮ್ಡೇಲ್ ಮನೆಗೆ ಪೊಲೀಸರು ಬುಧವಾರ ದಾಳಿ ನಡೆಸಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ನಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ. ಕ್ರ 54/2025 ಕಲಂ: 191(1), 191(2), 191(3), 118(1), 118 (2), 109, 103 ಜೊತೆಗೆ 190 ಬಿಎನ್ಎಸ್ 2023 ದಾಖಲಾಗಿದೆ.
ಪ್ರಕರಣ ತನಿಖೆಗೆ ಸಂಬಂಧಿಸಿ ತನಿಖಾ ತಂಡವು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಭರತ್ ಕುಮ್ಡೇಲ್ ಮನೆಯನ್ನು ಶೋಧ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.