ಬೆಂಗಳೂರು : ಬೆಂಗಳೂರಿನ ಕೋರಮಂಗಲದ ಪಾಸ್ಪೋರ್ಟ್ ಕಚೇರಿ ಮತ್ತು ಮುಖ್ಯಮಂತ್ರಿಯ ಮನೆಗೆ ಬಾಂಬ್ ಬೆದರಿಕೆ ಸಂದೇಶವೊಂದು ಇ-ಮೇಲ್ ಮೂಲಕ ಬಂದಿರುವ ಘಟನೆ ನಡೆದಿದೆ. ಈ ಸಂದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
“ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಬೇಸ್ಟ್ ಐಇಡಿ ಬಳಸಿ ಬೆಂಗಳೂರಿನ ಪಾಸ್ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುತ್ತೇವೆ.ಸವುಕ್ಕು ಶಂಕರ್ ಮತ್ತು ಕಸಬ್ (ತಾಜ್ ಅಟ್ಯಾಕ್)ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ,” ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಕೂಡಲೇ ಕೋರಮಂಗಲ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರೆದಿದೆ.