ಜಮ್ಮು ಮತ್ತು ಕಾಶ್ಮೀರ : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು.
ಹಾಗೆಯೇ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯನ್ನೂ ಕೂಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಮನೋಜ್ ಸಿನ್ಹಾ ಹಾಗೂ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಹಾಗೂ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ ಬಳಿಕ ರಾಷ್ಟ್ರಧ್ವಜ ಹಿಡಿದು ಒಂದು ಸುತ್ತು ಪ್ರದಕ್ಷಿಣೆ ಹಾಕಿದರು
ಚೆನಾಬ್ ಸೇತುವೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ಶ್ರೀನಗರ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು. ಮಾತಾ ವೈಷ್ಣೋದೇವಿ ದೇವಾಲಯದ ನೆಲೆಯಾದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮೋದಿ ಚಾಲನೆ ನೀಡಲಿದ್ದಾರೆ.
ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್ ಸೇತುವೆ ಐಫೆಲ್ ಟವರ್ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.