ಬೆಂಗಳೂರಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ: ಬಿಹಾರ ಏಳು ಮಂದಿ ಸೆರೆ

ಬೆಂಗಳೂರು: ಹದಿಹರೆಯದ ಹುಡುಗಿಯನ್ನು ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 21 ರಂದು ಶವ ಪತ್ತೆಯಾಗಿತ್ತು.

ಬೆಂಗಳೂರು ಗ್ರಾಮಾಂತರ ವಿಭಾಗದ ಸೂರ್ಯನಗರ ಪೊಲೀಸರು ಏಳು ಆರೋಪಿಗಳನ್ನು ಬಿಹಾರದಲ್ಲಿ ಪತ್ತೆ ಹಚ್ಚಿ ಕರ್ನಾಟಕಕ್ಕೆ ಕರೆತರುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಬಿಹಾರದ ನವಾಡ ಜಿಲ್ಲೆಯವರು.

ಏಳು ಆರೋಪಿಗಳಲ್ಲಿ ಪೈಕಿ ಮೂವರನ್ನು ಆಶಿಕ್ ಕುಮಾರ್, ಮುಖೇಶ್ ಮತ್ತು ರಾಜಾರಾಮ್ ಮೋಹನ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಆಶಿಕ್ ಕುಮಾರ್ ವಿವಾಹಿತನಾಗಿದ್ದು, ಈತನಿಗೆ ಇಬ್ಬರು ಮಕ್ಕಳಿದ್ದಾರೆ. ಅಪರಾಧದ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಆರೋಪಿಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 21 ರಂದು ಬೆಂಗಳೂರಿನ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ, ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದ್ದು, ಅದರಲ್ಲಿದ್ದ ವಸ್ತುಗಳನ್ನು ಜನರು ಬೆಚ್ಚಿಬಿದ್ದಿದ್ದರು. ಯಾಕೆಂದರೆ ಅದರಲ್ಲಿ 17 ವರ್ಷದ ಬಾಲಕಿ ರೀಮಾ ಎಂಬವಳ ಶವ ಮುದ್ದೆಯಾಗಿ ಪತ್ತೆಯಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್‌ನಲ್ಲಿ ತುಂಬಿಸಿ ಶವವನ್ನು ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ. ಆದರೆ, ಬಾಲಕಿಯನ್ನು ಬೇರೆ ಸ್ಥಳದಲ್ಲಿ ಕೊಲ್ಲಲಾಗಿದ್ದರೂ, ಆರೋಪಿಗಳು ಆಕೆಯ ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಕ್ಯಾಬ್‌ನಲ್ಲಿ ರೈಲ್ವೆ ಹಳಿಗಳ ಬಳಿ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ನಾಪತ್ತೆಯಾಗಿದ್ದ ಸಂದರ್ಭದಲ್ಲಿಯೇ ರ್ನಾಟಕದಾದ್ಯಂತ ಹಲವೆಡೆ ನಾಪತ್ತೆ ನೋಟಿಸ್‌ಗಳನ್ನು ಹಾಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಅಂತಹ ಪ್ರಕರಣಗಳು ಸಾಮಾನ್ಯವಾಗಿ ರೈಲ್ವೆ ಪೊಲೀಸರ ವ್ಯಾಪ್ತಿಗೆ ಬರುತ್ತವೆಯಾದರೂ, ಘಟನೆಯು ನಮ್ಮ ಪ್ರದೇಶಕ್ಕೆ ಸಂಬಂಧಿಸಿರಬಹುದು ಎಂಬ ಕಾರಣಕ್ಕೆ ನಾವು ತನಿಖೆಯಲ್ಲಿ ಭಾಗಿಯಾಗಿದ್ದೇವೆ. ಸೂಟ್‌ಕೇಸ್‌ನಲ್ಲಿ ಶವ ಮಾತ್ರ ಇತ್ತು – ಯಾವುದೇ ಗುರುತಿನ ಚೀಟಿ ಅಥವಾ ವೈಯಕ್ತಿಕ ವಸ್ತುಗಳು ಪತ್ತೆಯಾಗಿಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಬೆಂಗಳೂರು ಗ್ರಾಮೀಣ) ಸಿ.ಕೆ. ಬಾಬಾ ಹೇಳಿದರು.

error: Content is protected !!