ಕಾರ್‌ ಚಾಲಕನ ನಿರ್ಲಕ್ಷದ ಚಾಲನೆಗೆ ಪ್ರತಿಭಾವಂತ ಹುಡುಗ ಬಲಿ

ಮಲ್ಪೆ: ಕಾರ್‌ ಚಾಲಕನ ಧಾವಂತದಿಂದ ಬೈಕ್‌ನಲ್ಲಿ ಸಾಗುತ್ತಿದ್ದ ಪ್ರತಿಭಾವಂತ ಹುಡುಗ ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ ಭಜನೆ ಗಾಯಕ, ತಬಲಾ ವಾದಕನಾಗಿದ್ದ ಮೂಡುಬಿದಿರೆ ಆಳ್ವಾಸ್ ಇಂಜಿನಿಯರ್ ಕಾಲೇಜಿನ ಅಂತಿಮ ಎಂಬಿಎ ವಿದ್ಯಾರ್ಥಿ ಕಿದಿಯೂರಿನ ಸಂಕೀರ್ತನ್ (28) ಮೃತಪಟ್ಟ ದುರ್ದೈವಿ.

ಕುಂದಾಪುರದಿಂದ ಮಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ- 66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಕಾರನ್ನು ರಸ್ತೆ ವಿಭಜಕಕ್ಕೆ ಹತ್ತಿಸಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆಸಿದ್ದಾನೆ. ಅಲ್ಲಿಂದ ಮುಂದಕ್ಕೆ ವಿರುದ್ಧ ದಿಕ್ಕಿನಲ್ಲಿ ಸಾಗಿದ ಕಾರ್‌ ಸಂಕೀತರ್ನ್‌ ಹೋಗುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನಿಂದ ಬಿದ್ದ ಸಂಕೀರ್ತನ್ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಷ್ಟು ಮಾತ್ರವಲ್ಲದೆ ಗೂಡ್ಸ್‌ ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!