ಯೆಯ್ಯಾಡಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಸ್ಥಿತಿ ಗಂಭೀರ

ಮಂಗಳೂರು : ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆ ಯುವಕನಿಗೆ ಚೂರಿ ಇರಿದ ಘಟನೆ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗುತ್ತಿದೆ . ಯುವಕನ ಸ್ಥಿತಿ ಗಂಭೀರ.

ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಆರೋಪಿಗಳು ಎಂದು ತಿಳಿದು ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಒಂದು ತಿಂಗಳ ಹಿಂದೆ ಇವರುಗಳ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆಯ ದ್ವೇಷದ ಹಿನ್ನೆಲೆ ನಿನ್ನೆ ಮತ್ತೆ ಕೌಶಿಕ್ ಮೇಲೆ ಹಲ್ಲೆ ಮಾಡಲಾಗಿದೆ. ಹೊಟ್ಟೆಯ ಭಾಗಕ್ಕೆ ಚೂರಿ ಇರಿತ ಹಿನ್ನೆಲೆ ಕೌಶಿಕ್ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.]

 

error: Content is protected !!