ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಬಿಜೆಪಿ ಕಾರ್ಯಕರ್ತರು, ನಾಯಕರು ಪಟ್ಟು ಹಿಡಿದು ಬಜ್ಪೆಯಲ್ಲಿ ಪ್ರತಿಭಟಿಸಿದ್ದರು. ಇದರ ಮರುದಿನ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲ್ ನಲ್ಲಿ ಅಮಾಯಕ ಯುವಕ ಅಬ್ದುಲ್ ರೆಹ್ಮಾನ್ ನನ್ನು ದೀಪಕ್ ಪೂಜಾರಿ ಎಂಬಾತ ಹೊಯ್ಗೆ ಹಾಕಿಸುವ ನೆಪದಲ್ಲಿ ಮನೆಗೆ ಕರೆದು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು.
ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂದಿಸಿದ್ದು ರೆಹ್ಮಾನ್ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.