ರೈಲ್ವೇ ಟ್ರಾಕ್‌ನಲ್ಲಿ ತಮ್ಮನಿಂದಲೇ ಪೆಟ್ರೋಲ್ ಸುರಿದು ಅಣ್ಣನ ಕೊಲೆಗೆ ಯತ್ನ !

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಗದಗದ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.

ಕೋಡಿಂಬಾಳದ ಕೊರಿಯರ್ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದಂದು ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ.

 

ಭಾರೀ ಕಿರುಚಾಟ ಕೇಳಿ ಆ ಕೂಡಲೇ ಸ್ಥಳೀಯರು ಬಂದು ಗಮನಿಸಿದಾಗ ಹನುಮಂತಯ್ಯ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

error: Content is protected !!