ಬೆಂಗಳೂರು: ದೂರ ಮಾಡಲೆತ್ನಿಸಿ ಗಂಡನಿದ್ದ ಪ್ರಿಯತಮೆಗೆ ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆ ನಡೆಸಿರುವ ಭೀಭತ್ಸ ಘಟನೆ ಜೂನ್ 7ರಂದು ರಾತ್ರಿ ಬೆಂಗಳೂರಿನ ಸುಬ್ರಹ್ಮಣ್ಯಪುರ ವ್ಯಾಪ್ತಿಯ ಪೂರ್ಣಪ್ರಜ್ಞಾ ಲೇಔಟ್ನ ಖಾಸಗಿ ಹೋಟೆಲ್ವೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹರಿಣಿ (33) ಕೊಲೆಯಾದ ಮಹಿಳೆ. ಸಾಫ್ಟ್ವೇರ್ ಇಂಜಿನಿಯರ್ ಯಾಗಿರುವ ತಲಘಟ್ಟಪುರದ ನಿವಾಸಿ ಯಶಸ್ (25) ಕೊಲೆ ಆರೋಪಿಯಾಗಿದ್ದು, ಆತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯು ಪತಿಯೊಂದಿಗೆ ಕೆಂಗೇರಿ ವ್ಯಾಪ್ತಿಯಲ್ಲಿ ವಾಸವಿದ್ದರು. ಕೆಲ ತಿಂಗಳುಗಳ ಹಿಂದೆ ನಡೆದ ಜಾತ್ರೆಯಲ್ಲಿ ಕಾಮನ್ ಫ್ರೆಂಡ್ ಒಬ್ಬರ ಮೂಲಕ ಮಹಿಳೆ ಮತ್ತು ಯಶಸ್ ಮಧ್ಯೆ ಪರಿಚಯವಾಗಿತ್ತು. ಇಬ್ಬರೂ ಫೋನ್ ನಂಬರ್ ಎಕ್ಸ್ಚೇಂಜ್ ಮಾಡಿಕೊಂಡಿದ್ದರು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಇಬ್ಬರೂ ಸಹ ಹಲವು ಬಾರಿ ಭೇಟಿಯಾಗುವುದು, ಫೋನ್ನಲ್ಲಿ ಮಾತನಾಡುವುದನ್ನು ತಿಳಿದು ಮಹಿಳೆಗೆ ಅವರ ಪತಿ ಎಚ್ಚರಿಕೆ ನೀಡಿ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದರು. ಇದಾದ ಬಳಿಕ ಮಹಿಳೆಯು ಯಶಸ್ ಜೊತೆ ಅಂತರ ಕಾಯ್ದುಕೊಂಡಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆದರೆ ಮತ್ತೆ ಜೂನ್ 7ರಂದು ಪೂರ್ಣಪ್ರಜ್ಞಾ ಲೇಔಟ್ನ ಖಾಸಗಿ ಹೋಟೆಲ್ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಕೆಲ ದಿನಗಳ ಕಾಲ ಈಕೆ ತನ್ನ ಸಂಪರ್ಕಕ್ಕೆ ಸಿಗದೇ ಚಡಪಡಿಸಿದ್ದ ಯಶಸ್, ಈ ರೀತಿಯಾದರೆ ತನಗೆ ಸಿಗದವಳು ಇನ್ನು ಮುಂದೆ ಯಾರಿಗೂ ಸಿಗಬಾರದು ಎಂದು ನಿರ್ಧರಿಸಿ ಚಾಕುವಿನೊಂದಿಗೆ ಹೋಟೆಲ್ಗೆ ಬಂದಿದ್ದ. ಪೂರ್ವ ನಿರ್ಧಾರವಾಗಿಯೇ ಬಂದವನು ಮಹಿಳೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಸ್ಥಳದಿಂದ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಮ್ಮಿಗೆಪುರದ ಹರಿಣಿಯ ಗಂಡ ಸ್ಥಳೀಯ ಜಮಿನ್ದಾರ. ಹಣಕಾಸಿಗೆ ಕೊರತೆ ಇರ್ಲಿಲ್ಲ. ಇಬ್ಬರು ಹೆಣ್ಣು ಮಕ್ಕಳನ್ನ ಓದಿಸಿಕೊಂಡು ಹೆಂಡತಿಯನ್ನ ಚೆನ್ನಾಗಿ ನೋಡಿಕೊಂಡಿದ್ದನಂತೆ. ಇತ್ತಿಚೇಗೆ ದೊಡ್ಡ ಮನೆ ಕಟ್ಟಲು ಪಾಯ ಪೂಜೆ ಸಹ ಮಾಡಿದ್ರಂತೆ. ಹೀಗಿರುವಾಗಲೇ ಪತ್ನಿ ಹರಿಣಿ ಹಾಗೂ ಯಶಸ್ ನಡುವಿನ ಅನೈತಿಕ ಸಂಬಂಧ ಗಂಡನಿಗೆ ಗೊತ್ತಾಗಿದೆ. ಗಂಡ ಪತ್ನಿಗೆ ಬುದ್ಧಿ ಹೇಳಿ ಹರಿಣಿಯ ಫೋನ್ ಕೂಡ ಕಿತ್ಕೊಂಡು ಮನೆಯಲ್ಲೇ ಕೂಡಿ ಹಾಕಿದ್ದರಂತೆ ಪತಿ ದಾಸೇಗೌಡ. ಇದಾದ ನಂತರ ಪತ್ನಿ ಸರಿ ಹೋಗ್ತಾಳೆ ಅಂತ ಹೊರಗಡೆ ಬಿಟ್ಟಿದ್ದಾನೆ. ಇದೀಗ ಪೋಲಿ ಹುಡುಗನ ಸಹವಾಸ ಮಾಡಲು ಹೋದ ರೂಪಸಿ ಹರಿಣಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸುಬ್ರಮಣ್ಯಪುರ ಠಾಣೆ ಪೊಲೀಸರು, ಎಫ್ಎಸ್ಎಲ್ ತಂಡ ಸಾಕ್ಷ್ಯಗಳನ್ನ ಸಂಗ್ರಹಿಸಿ ಆರೋಪಿಯನ್ನ ಬಂಧಿಸಿದೆ. ವಿಚಾರಣೆ ನಡೆಸಿದಾಗ ಮಹಿಳೆ ತನ್ನಿಂದ ಅಂತರ ಕಾಪಾಡಿಕೊಳ್ಳಲು ಬಯಸಿದ್ದರಿಂದ ಹತ್ಯೆಗೈದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಸುಬ್ರಮಣ್ಯಪುರ ಪೊಲೀಸರು ಆರೋಪಿ ಯಶಸ್ನನ್ನು ವಿಚಾರಣೆ ಮಾಡುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ.