ಕುಂದಾಪುರ: ಚಿಲ್ಲರೆ ಕೇಳಿದ್ದಕ್ಕೆ ಮೆಡಿಕಲ್ ಶಾಪ್ ಯುವತಿ ಮೇಲೆ ಗ್ರಾಹಕಿಯೋರ್ವಳು ಹಲ್ಲೆ ನಡೆಸಿದ ಘಟನೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ವೊಂದರಲ್ಲಿ ನಡೆದಿದೆ. ಯಾಸ್ಮಿನ್ ಹಲ್ಲೆಗೈದ ಆರೋಪಿ.
ಮೆಡಿಕಲ್ ಶಾಪಿಗೆ ತೆರಳಿದ್ದ ಆರೋಪಿ ಯಾಸ್ಮಿನ್ ಔಷಧಿ ಖರೀದಿಸಿ, 500 ರೂ. ಕರೆನ್ಸಿ ಕೊಟ್ಟಿದ್ದಳು.. ಆಗ ಮೆಡಿಕಲ್ ಶಾಪ್ ಹುಡುಗಿ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಅಂದಾಗ ಸಿಟ್ಟಿಗೆದ್ದ ಯಾಸ್ಮಿನ್ ಅವಾಚ್ಯವಾಗಿ ಬೈಯ್ದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಯುವತಿಯನ್ನು ಕುಂದಾಪುರದ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಗೆ ಎಸ್ಪಿ ಭೇಟಿ: ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ, ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮಕೈಗೊಳ್ಳಾಗುವುದು ಎಂದವರು ತಿಳಿಸಿದ್ದಾರೆ.