ಚಿಲ್ಲರೆ ವಿಷಯಕ್ಕೆ ಮೆಡಿಕಲ್‌ ಹುಡುಗಿಗೆ ಹಲ್ಲೆಗೈದ ಗ್ರಾಹಕಿ ಅರೆಸ್ಟ್

ಕುಂದಾಪುರ: ಚಿಲ್ಲರೆ ವಿಷಯಕ್ಕೆ ಮಾವಿನಕಟ್ಟೆ ಮೆಡಿಕಲ್ ಶಾಪ್ ಹುಡುಗಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಗ್ರಾಹಕಿಯನ್ನು ಕುಂದಾಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಯಾಸ್ಮೀನ್ ಬಂಧಿತ ಗ್ರಾಹಕಿ.

ಜೂ.9ರಂದು ಮೆಡಿಕಲ್ ನಲ್ಲಿ ಔಷಧಿ ಖರೀದಿಸಿದ ಯಾಸ್ಮಿನ್, 500 ರೂ. ಚಿಲ್ಲರೆ ವಿಚಾರದಲ್ಲಿ ಮೆಡಿಕಲ್‌ನ ಉದ್ಯೋಗಿ ಯುವತಿ ಜೊತೆ ಗಲಾಟೆ ಮಾಡಿದ್ದರು. ಬಳಿಕ ಯಾಸ್ಮೀನ್ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಕುರಿತ ಸಿಸಿಟಿವಿ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಯಾಸ್ಮೀನ್‌ಳನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

error: Content is protected !!