ʼನಾನು ಹೇಗೆ ಬದುಕುಳಿದೆನೋ ಗೊತ್ತಿಲ್ಲʼ- ಸಾವಿನ ದವಡೆಯಿಂದ ಪಾರಾದ ಪ್ರಯಾಣಿಕನ ಮಾತು

ಅಹಮದಾಬಾದ್ : ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅದೃಷ್ಟವಶಾತ್‌ ಪ್ರಾಣಪಾಯದಿಂದ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು ದುರಂತದಿಂದ ಪಾರಾದ ಕ್ಷಣಗಳನ್ನು ವಿವರಿಸಿದ್ದಾರೆ.

ಪ್ರಸ್ತುತ ರಮೇಶ್ ವಿಶ್ವಾಸ್ ಅವರು ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾಧ್ಯಮಗಳೊಂದಿಗೆ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದರು. ಪ್ರಧಾನಿ ಮೋದಿಯವರು ಘಟನೆ ಹೇಗೆ ಆಯ್ತು ಎಂದು ಕೇಳಿದರು. ನಾನು ಎಲ್ಲವನ್ನು ವಿವರಿಸಿದ್ದೇನೆ ಎಂದಿದ್ದಾರೆ.

ನನ್ನ ಕಣ್ಣೆದುರೇ ಎಲ್ಲಾ ನಡೆದು ಹೋಯಿತು. ನಾನು ಹೇಗೆ ಬದುಕುಳಿದೆ ಗೊತ್ತಿಲ್ಲ, ನನಗೆ ನಂಬಲು ಕಷ್ಟವಾಗುತ್ತಿದೆ. ಅಲ್ಲಿ ಕೆಲ ಕ್ಷಣ ನಾನು ಸತ್ತೇ ಹೋಗಿದ್ದೇನೆ ಎಂದು ಅನ್ನಿಸಿತ್ತು. ಆದರೆ ಕಣ್ಣು ಬಿಟ್ಟಾಗ ನಾನು ಬದುಕಿದ್ದೇನೆ ಎಂದು ಗೊತ್ತಾಯ್ತು ಎಂದು ಕರಾಳ ಕ್ಷಣವನ್ನು ಮಾದ್ಯಮದ ಮುಂದೆ ಹಂಚಿಕೊಂಡಿದ್ದಾರೆ.

ವಿಮಾನ ಟೇಕಾಫ್ ಆಗ್ತಿದ್ದಂತೆ ಏನೋ ಸಮಸ್ಯೆ ಆಗಿದೆ ಎಂದು ಗೊತ್ತಾಯ್ತು. 5ರಿಂದ 10 ಸೆಕೆಂಡ್ ವಿಮಾನ ಸ್ಟ್ರಕ್‌ ಆದಂತೆ ಅನ್ನಿಸಿತು. ವಿಮಾನದ ಒಳಗೆ ಹಸಿರು, ಬಿಳಿ ಬಣ್ಣದ ಲೈಟ್ ಆನ್ ಆಯ್ತು. ಕೆಲವೇ ಸೆಕೆಂಡ್‌ನಲ್ಲಿ ವಿಮಾನ ಕಟ್ಟಡಕ್ಕೆ ಡಿಕ್ಕಿಯಾಯ್ತು. ಬಳಿಕ ವಿಮಾನ ಕಟ್ಟಡದ ಮೇಲಿಂದ ಕೆಳಗೆ ಇಳಿದಿತ್ತು ಎಂದು ತಿಳಿಸಿದ್ದಾರೆ.

error: Content is protected !!