ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಕಳೆದ ಶುಕ್ರವಾರ ಮದ್ಯಾಹ್ನದ ವೇಳೆ ಕೌಶಿಕ್ ಎಂಬಾತನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು ಕೌಶಿಕ್ ಇಂದು ಸಂಜೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರಕರಣ ಕೊಲೆ ಪ್ರಕರಣವಾಗಿ ಬದಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಆರೋಪಿಗಳು ಎಂದು ತಿಳಿದು ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಒಂದು ತಿಂಗಳ ಹಿಂದೆ ಇವರುಗಳ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆಯ ದ್ವೇಷದ ಹಿನ್ನೆಲೆ ಶುಕ್ರವಾರ ಮತ್ತೆ ಕೌಶಿಕ್ ಮೇಲೆ ಹಲ್ಲೆ ಮಾಡಲಾಗಿದೆ. ಹೊಟ್ಟೆಯ ಭಾಗಕ್ಕೆ ಚೂರಿ ಇರಿತ ಹಿನ್ನೆಲೆ ಕೌಶಿಕ್ ನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.