ಮಂಗಳೂರು : ನಗರದ ಹೃದಯಭಾಗದ ಯುನಿವರ್ಸಿಟಿ ಕಾಲೇಜ್ ಮುಂಭಾಗದ ಗುಜಿರಿ ಅಂಗಡಿಯಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದ್ದು, ಅದರ ಪಕ್ಕದಲ್ಲಿರುವ ಬಟ್ಟೆ ಅಂಗಡಿಗೂ ಬೆಂಕಿ ಆವರಿಸಿಕೊಂಡಿದೆ.
ಗುಜಿರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಅಂಗಡಿ ಮಾಲಿಕರಿಗೆ ಹಾನಿಯಾಗಿದೆ.
ಪಾಂಡೇಶ್ವರ, ಕದ್ರಿ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಬೆಂಕಿ ಆರಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.