ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ಅಧಿಕಾರಿಗಳು ಮಂಗಳೂರಿಗೆ ದೌಡು, ತನಿಖೆ ಆರಂಭ

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿದ ಬೆನ್ನಲ್ಲೇ ಅದರ ಅಧಿಕಾರಿಗಳು ಇದೀಗ ಮಂಗಳೂರಿಗೆ ಆಗಮಿಸಿದ್ದು, ತನಿಖೆ ಸದ್ಯದಲ್ಲೇ ಆರಂಭಗೊಳ್ಳಲಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ|ಬ್ರಿಜೇಶ್‌ ಚೌಟ ಅವರು ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಿಚ ಅಮಿತ್‌ ಶಾಗೆ ಪತ್ರ ಬರೆದು, ‌ʻಟಾರ್ಗೆಟ್‌ ಕಿಲ್ಲಿಂಗ್ʼ ಎಂದು ಆರೋಪಿಸಿ, ಇದರ ಹಿಂದೆ ಮತೀಯ ಸಂಘಟನೆಗಳಿರುವ ಬಗ್ಗೆ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಪ್ರಕಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಈ ಪ್ರಕರಣವನ್ನು ಸ್ವತಃ ಎನ್‌ಐಎ ಸಂಸ್ಥೆಯೇ ಆಸಕ್ತಿ ವಹಿಸಿ ಈ ಪ್ರಕರಣವನ್ನು ತಮಗೆ ವಹಿಸಿ ಎಂದು ಆಗ್ರಹಿಸಿರುವುದರಿಂದ ಪ್ರಕರಣವನ್ನು ಆ ಸಂಸ್ಥೆಗೆ ವಹಿಸಲಾಗಿದೆ ಎಂದು ಗೃಹಸಚಿವರು ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಇಂದು ಎನ್‌ಐಎ ಘಟಕದ ಅಧಿಕಾರಿಗಳು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಹತ್ಯೆ ಪ್ರಕರಣದ ಮಾಹಿತಿಗಳನ್ನು ಬಜ್ಪೆ ಹಾಗೂ ಸಿಸಿಬಿ ಪೊಲೀಸರಿಂದ ಪಡೆದುಕೊಂಡಿದ್ದಾರೆ.  ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ತನಿಖೆಯ ಜವಾಬ್ದಾರಿ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

error: Content is protected !!