ಅಹಮದಾಬಾದ್: ಏರ್ ಇಂಡಿಯಾ ವಿಮಾನ ಪತನದಿಂದ ಮೃತಪಟ್ಟ ಒಬ್ಬೊಬ್ಬರ ಮಾಹಿತಿ ಹೊರಗಡೆ ಬರುತ್ತಾ ಇದೆ. ಇದುವರೆಗೆ 290 ಮಂದಿ ಮೃತಪಟ್ಟಿದ್ದು, ಅನೇಕ ಮಂದಿಯ ಮಾಹಿತಿ ಲಭ್ಯವಾಗಿದೆ. ಈ ಪೈಕಿ ಗಗನ ಸಖಿ ಹಸಸ್ಮುಖಿ ಮನೀಷಾ, ನವವರ ಗಜರಾತ್ನ ವಡೋದರಾದ ಭವಿಕ್ ಮಹೇಶ್ವರಿ ಕೂಡಾ ಸೇರಿದ್ದಾರೆ.
ಹಸನ್ಮುಖಿ ಮನೀಷಾಳ ನಗು ಕಸಿದ ಏರ್ ಇಂಡಿಯಾ
ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡವರಲ್ಲಿ ಗಗನಸಖಿ ಮನೀಷಾ ಥಾಪಾ (27) ಕೂಡಾ ಸೇರಿದ್ದಾರೆ. ನಗುಮೊಗದ ಹಸನ್ಮುಖಿಯಾಗಿದ್ದ ಮನೀಷಾ ಥಾಪಾ ನೇಪಾಳ ಮೂಲದವರಾದರೂ, ಪಾಟ್ನಾದಲ್ಲಿ ಬೆಳೆದಿದ್ದರು. ಮೊದಲು ಇಂಡಿಗೋದಲ್ಲಿ ಗ್ರೌಂಡ್ ಸ್ಟಾಫ್ ವೃತ್ತಿ ಆರಂಭಿಸಿದ ಅವರು ಬಳಿಕ ಆಕಾಶ್ ಏರ್, ನಂತರ ಏರ್ ಇಂಡಿಯಾ ಸೇರಿದಲ್ಲಿ ಗಗನಸಖಿಯಾಗಿದ್ದರು. ಏರ್ ಇಂಡಿಯಾ ಸೇರಿದ ಬಳಿಕ ಹೆಚ್ಚಾಗಿ ಲಂಡನ್, ಆಸ್ಟ್ರೇಲಿಯಾ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದರು.
ಹಸನ್ಮುಖಿ ಮನೀಷಾ ಕೋಪ ಮಾಡ್ಕೊಂಡಿದ್ದನ್ನು ನೋಡೇ ಇಲ್ಲ. ಎಲ್ಲದಕ್ಕೂ ನಗುವಿನ ಮೂಲಕವೇ ಉತ್ತರಿಸುತ್ತಿದ್ದಳು. ಅಲ್ಲದೇ ಕಲಿಕೆಯಲ್ಲಿಯೂ ಸದಾ ಮುಂದಿದ್ದರು ಎಂದು ಅವರ ಸ್ನೇಹಿತರು ಆಕೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ಇದೀಗ ಮನೀಷಾ ಸಾವಿನ ವಿಚಾರ ಕೇಳಿ, ಆಕೆ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ವೈದ್ಯರ ಆರೈಕೆಯಲ್ಲಿದ್ದಾರೆ. ಸದಾ ಆಗಸದಲ್ಲಿ ಹಾರಬೇಕೆಂದು ಕನಸುಕಂಡಿದ್ದ 10 ಗಗನಸಖಿರು ವಿಮಾನ ದುರಂತದಲ್ಲಿ ಬದುಕು ಅಂತ್ಯಗೊಳಿಸಿರುವುದು ಹೃದಯವಿದ್ರಾಕ ಸಂಗತಿಯಾಗಿದೆ.
ನವವರನ ದಾಂಪತ್ಯ ಕನಸನ್ನು ಭಗ್ನಗೊಳಿಸಿದ ಏರ್ ಇಂಡಿಯಾ
ಏರ್ ಇಂಡಿಯಾ ವಿಮಾನ ದುರಂತದಲ್ಲಿ ನವವರವೊಬ್ಬ ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ್ದಾರೆ. ಗುಜರಾತ್ನ ವಡೋದರಾದ ಭವಿಕ್ ಮಹೇಶ್ವರಿ (26) ಬದುಕನ್ನು ಏರ್ ಇಂಡಿಆ ನಾಶ ಮಾಡಿದೆ.
ಕೆಲ ವರ್ಷಗಳಿಂದ ಲಂಡನ್ನಲ್ಲಿಯೇ ವಾಸವಾಗಿದ್ದ ಭವಿಕ್ ಮಹೇಶ್ವರಿ ಜೂನ್ 10ರಂದು ರಿಜಿಸ್ಟರ್ ಮದುವೆ ಆಗಿದ್ದರು. ಮುಂದಿನ ಬಾರಿ ಲಂಡನ್ನಿಂದ ವಾಪಸ್ ಬಂದಾಗ ಸಂಭ್ರಮಾಚರಣೆಗೆ ನಿರ್ಧರಿಸಿದ್ದರು. ಭವಿಕ್, ಪ್ರತಿ ವರ್ಷ 15 ದಿನ ರಜೆ ಹಾಕಿ ಊರಿಗೆ ಬರುತ್ತಿದ್ದರು. ಈ ಬಾರಿಯೂ ಭವಿಕ್ ಊರಿಗೆ ಬಂದಿದ್ದರು. ಈ ವೇಳೆ ಮನೆಯವರು ಮದುವೆಯಾಗಿಯೇ ಹೋಗು ಎಂದು ಒತ್ತಾಯಿಸಿದ್ದರು. ಮನೆಯವರ ಒತ್ತಾಯಕ್ಕೆ ಮಣಿದು ಭವಿಕ್, 2 ದಿನ ಮುನ್ನ ಸರಳವಾಗಿ ಮದುವೆಯಾಗಿದ್ದರು. ಭವಿಕ್, ಲಂಡನ್ಗೆ ತೆರಳಿದ ಮೇಲೆ ಪತ್ನಿಗೆ ವೀಸಾ ರೆಡಿ ಮಾಡಿ ಪತ್ನಿಯನ್ನು ಕರೆಸಿಕೊಳ್ಳಲು ಸಿದ್ಧರಾಗಿದ್ದರು. ಏರ್ಪೋರ್ಟ್ಗೆ ಬಂದು ಭವಿಕ್ರನ್ನು ಪತ್ನಿ ಬೀಳ್ಕೊಟ್ಟಿದ್ದರು. ಪತ್ನಿ ವಾಪಸ್ ಮನೆ ತಲುಪುವ ಮುನ್ನವೇ ಪತಿಯ ಸಾವಿನ ಸುದ್ದಿ ಕೇಳಿಬಂದಿದ್ದು, ಭವಿಕ್ ಪತ್ನಿ ಹಾಗೂ ಕುಟುಂಬಸ್ಥರ ಆಕಂದ್ರನ ಮುಗಿಲು ಮುಟ್ಟಿದೆ.
ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟ ಏರ್ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು ಮೃತರ ಸಂಖ್ಯೆ 290ಕ್ಕೆ ಏರಿಕೆಯಾಗಿದೆ. ವಿಮಾನ ಪ್ರಯಾಣಿಕರಲ್ಲದೆ 33 ಮಂದಿ ಕಾಲೇಜ್ ಹಾಸ್ಟೆಲ್ ಸೇರಿ ಹೊರಗಿನವರೂ ಸೇರಿದ್ದಾರೆ