ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು : ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು.

ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ ಅಥವಾ ಎಡವಿದಾಗ ಅವರನ್ನು ಕೈಯೆತ್ತಿ ಮೇಲೆ ತರುವಂತಹ ಕೆಲಸವನ್ನು ಹೆತ್ತವರು ಮಾಡಬೇಕೆಂದರು.

ಮುಖ್ಯ ಅತಿಥಿಯಾಗಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತನಾಡಿ ಮಂಗಳೂರು ಘಟಕವು ಅರ್ಹ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದರ ಮೂಲಕ ಅವರ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು ವಿದ್ಯಾವಂತರನ್ನಾಗಿ ಮಾಡುತ್ತಿರುವ ಕಾರ್ಯವು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಮಾತನಾಡಿ ವಿದ್ಯಾರ್ಥಿಗಳು ತಮಗೆ ವಿದ್ಯಾಭ್ಯಾಸವನ್ನು ನೀಡಲು ಶ್ರಮಿಸಿದ ಹೆತ್ತವರನ್ನು ಎಂದಿಗೂ ಆಶ್ರಮಕ್ಕೆ ಸೇರಿಸದೆ ಅವರನ್ನು ಕೊನೆ ಉಸಿರಿರುವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಕಿವಿ ಮಾತನ್ನು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿ. ಯು.ಸಿ, ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾದ ದಯಾನಂದ ಕಟೀಲು ಇವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಘಟಕದ ಮಾಜಿ ಅಧ್ಯಕ್ಷರು,ಸದಸ್ಯರು ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ವಿಧ್ಯಾರ್ಥಿ ಸಂಘಟನಾ ಕಾರ್ಯದರ್ಶಿ ಕ್ಷಿತಿಜ್ ಸ್ವಾಗತಿಸಿದರು.ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ಸದಸ್ಯರಾದ ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

 

error: Content is protected !!