ಅಜೆಕಾರು ಬಾಲಕೃಷ್ಣ ಪೂಜಾರಿ ಹತ್ಯೆ : ಪತ್ನಿಗೆ ಜಾಮೀನು!

ಕಾರ್ಕಳ: 2024ರ ಅ.20ರಂದು ಅಜೆಕಾರಿನ ಮರ್ಣೆ ಗ್ರಾಮದ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಉದ್ಯಮಿ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದಲ್ಲಿ ಪ್ರಿಯಕರನ ಜೊತೆ ಭಾಗಿಯಾಗಿದ್ದ ಪತ್ನಿ ಪ್ರತಿಮಾ(36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


ಇನ್ನೊರ್ವ ಆರೋಪಿ ಪ್ರತಿಮಾಳ ಪ್ರಿಯಕರ ದಿಲೀಪ್ ಹೆಗ್ಡೆ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು ತಮ್ಮ ಸಂಬಂಧಕ್ಕೆ ಬಾಲಕೃಷ್ಣ ಪೂಜಾರಿ ಅಡ್ಡಿಯಾಗುತ್ತಾರೆ ಎಂದು ಪ್ರತಿಮಾ ದಿಲೀಪ್ ಹೆಗ್ಡೆ ಜೊತೆ ಸೇರಿಕೊಂಡು ಕೊಲೆ ಮಾಡಿದ್ದರು. ಪ್ರತಿನಿತ್ಯ ಆಹಾರದಲ್ಲಿ ವಿಷ ಬೆರೆಸಿ ಕೊಡುತ್ತಿದ್ದ ಪರಿಣಾಮ ಬಾಲಕೃಷ್ಣ ಆಸ್ಪತ್ರೆ ಸೇರಿ ಬದುಕುಳಿದಿದ್ದರು. ಇದರಿಂದ ಕೆರಳಿದ್ದ ಪ್ರತಿಮಾ ತನ್ನ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ರಾತ್ರಿಯ ವೇಳೆ ಮನೆಗೆ ಕರೆಸಿ ಕುತ್ತಿಗೆ ಬಿಗಿದು ಕೊಲೆಗೈದಿದ್ದರು. ಪ್ರತಿಮಾ ಸೋದರ ಈ ಬಗ್ಗೆ ಅಜೆಕಾರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದರು. ಅ.25ರಂದು ಅಜೆಕಾರು ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!