ಭೀಕರ ಅಪಘಾತಕ್ಕೆ ಯುವ ಕಾಂಗ್ರೆಸ್ ಮುಖಂಡ ಸಹಿತ ಇಬ್ಬರು ದಾರುಣ ಬಲಿ!

ಮಂಗಳೂರು: ಇಂದು ನಸುಕಿನ ಜಾವ ಜಪ್ಪಿನಮೊಗರು ರಾ.ಹೆ.66ರ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಮುಂಭಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ ಸಹಿತ ಇಬ್ಬರು ಬಲಿಯಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.


ಬಲೆನೋ ಕಾರ್‌  ಚಾಲಕನ ನಿಯಂತ್ರಣ ತಪ್ಪಿ ಕಿರುಸೇತುವೆಯ ತಡೆಗೋಡೆಗೆ ಗುದ್ದಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲಪಾಡಿಯಲ್ಲಿ ಊಟ ಮಾಡಿ ಅಮನ್ ರಾವ್ ಚಲಾಯಿಸುತ್ತಿದ್ದ ಕಾರಿನಲ್ಲಿ ಮಂಗಳೂರಿನತ್ತ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಇಂಜಿನ್ ಭಾಗ ಹೊರಕ್ಕೆ ಬಂದಿತ್ತು. ಅಲ್ಲದೆ ಪ್ರಯಾಣಿಕರ ಜೀವರಕ್ಷಕ ಕವಚ ಏರ್ ಬ್ಯಾಗ್ ಚಿಂದಿಯಾಗಿದೆ.

ಎನ್ಎಸ್‌ಯುಐ ಜಿಲ್ಲಾ ಉಪಾಧ್ಯಕ್ಷ, ಕೊಂಚಾಡಿ ದೇರೆಬೈಲ್‌ ನಿವಾಸಿ ಓಂ ಶ್ರೀ ಪೂಜಾರಿ(24) ಹಾಗೂ ಕಾರು ಚಾಲಕ, ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(22) ಮೃತ ದುರ್ದೈವಿಗಳು. ಇಟಲಿ ಮೂಲದ ಪ್ರವಾಸಿಗ ಜೆರ್ರಿ ಅಪಾಯದಿಂದ ಪಾರಾಗಿದ್ದಾನೆ. ಅಲ್ಲದೆ ಜೊತೆಗಿದ್ದ ವಂಶಿ ಮತ್ತು ಆಶಿಕ್ ಗಂಭೀರ ಗಾಯಗೊಂಡಿದ್ದು ತೀವ್ರ ನಿಗಾದಲ್ಲಿದ್ದಾರೆ. ಓಂಶ್ರೀ ಅವರು ಚಾಲಕನ ಸೀಟಿನ ಹಿಂಬದಿಯಲ್ಲಿದ್ದರು ಎಂದು ತಿಳಿದುಬಂದಿದೆ.

ಮೃತ ಓಂಶ್ರೀ ಪೂಜಾರಿ ದಕ್ಷಿಣ ಕನ್ನಡ ಎನ್ ಎಸ್ಐಯು ಘಟಕದ ಉಪಾಧ್ಯಕ್ಷರಾಗಿದ್ದುಕೊಂಡು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯವಾಗಿದ್ದರು. ಮಳೆಗಾಲದ ಸಂದರ್ಭ ಮಳೆಹಾನಿಗೀಡಾದ ಸ್ಥಳಗಳಿಗೆ ತೆರಳಿ ಪರಿಹಾರ ಕಾರ್ಯಗಳಲ್ಲಿ ನಿರತಾಗಿದ್ದರು. ಮೃತ ಅಮನ್ ರಾವ್ ಫ್ಲೆಕ್ಸ್, ಪೋಸ್ಟರ್ ಮಾಡುವ ಉದ್ಯಮ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For video

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!