ಕಾರ್ಕಳ: ಮೂರು ದನಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯ ಗೋಶಾಲೆಯಲ್ಲಿ ಬೆಳಕಿಗೆ ಬಂದಿದೆ.
ಬಜಗೋಳಿಯಲ್ಲಿ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಡೆಸುತ್ತಿರುವ ಗೋಶಾಲೆಯಿಂದ ಜೂನ್ 16ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮೂರು ದನಗಳು ಕಳವಾಗಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳವಾದ ದನಗಳ ಮೌಲ್ಯ ಸುಮಾರು 10 ಸಾವಿರ ರೂಪಾಯಿ ಆಗಬಹುದೆಂದು ಟ್ರಸ್ಟ್ ಸಂಚಾಲಕ ಎಂ.ಕೆ. ವಿರಂಜಯ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಜಗೋಳಿಯಲ್ಲಿ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ಗೋಶಾಲೆಯನ್ನು ನಡೆಸುತ್ತಿದ್ದು, ಇಲ್ಲಿ ಗಾಯಗೊಂಡ, ಕಾಯಿಲೆಗೊಳಗಾದ, ಬೀದಿ ಪಾಲಾದ ಬೆಕ್ಕು, ನಾಯಿ ಮತ್ತು ದನಗಳನ್ನು ತಂದು ಆರೈಕೆ ಮಾಡಲಾಗುತ್ತಿದೆ ಎಂದು ಎಂ.ಕೆ. ವಿರಂಜಯ್ ವಿವರಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj