ಮಂಗಳೂರು: 105ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಈ ಶೈಕ್ಷಣಿಕ ವರ್ಷದ 2025 ಸಾಲಿನ *ಸಾಹಿತ್ಯ ಅಭಿರುಚಿ *ಕಾರ್ಯಕ್ರಮ ಜೂನ್ 10 ರಂದು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಚೇರ್ಮೆನ್ ರವೀಂದ್ರ ಶೆಟ್ಟಿ ಉಳಿದೊಟ್ಟು ವಹಿಸಿದರು.
ಮುಖ್ಯ ಸಂಪನ್ಮೂಲ ಅತಿಥಿಯಾಗಿ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರು ಹಾಗೂ ಲೇಖಕರಾದ ರವೀಂದ್ರ ರೈ ಕಲ್ಲಿಮಾರ್ ಹಾಗೂ ಹೆಸರಾಂತ ನಿರೂಪಕಿ ನಮ್ಮ ಕುಡ್ಲ ಚಾನೆಲ್ ಕಾರ್ಯಕ್ರಮ ನಿರೂಪಕಿ, ಡಾ. ಪ್ರಿಯ ಹರೀಶ್ , ಕಾರ್ಯಕ್ರಮಕೆ ಶುಭ ಹಾರೈಸಿದರು .ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ನಯೀಮ್ ಹಮೀದ್ ಸಂಘಟಕನಾದ ಉಮೇಶ್ ರಾವ್ ಕುಂಬಳೆ, ಗೌರವ ಉಪಸ್ಥಿತರಿದರು. ವಿದ್ಯಾ ರತ್ನ ಎಜುಕೇಶನಲ್ ಟ್ರಸ್ಟ್ ಇದರ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ ವೇದಿಕೆಯಲ್ಲಿದ್ದರು,ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು .ಲೇಖಕಿ, ಶಿಕ್ಷಕಿ ಸುರೇಖಾ ಯಾಲವಾರ ಕಾರ್ಯಕ್ರಮ ನಿರೂಪಿಸಿದರು.ಸಹ ಶಿಕ್ಷಕರಾದ ರವಿಕುಮಾರ್ ವಂದಿಸಿದರು .
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj