ಕಾಸರಗೋಡು: ಬೆಂಗಳೂರಿನ ಯುವಕನೋರ್ವ ಕಾಸರಗೋಡು ತಳಂಗರೆಯ ಕೆರೆಯಲ್ಲಿ ಮುಳುಗಿ ಮೃತಪಟ್ಟು, ಇನ್ನೋರ್ವ ಗಂಭೀರಗೊಂಡ ಘಟನೆ ಇಂದು ಬೆಳಕಿಗೆ ಬಂದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತ ದುರ್ದೈವಿ. ಗಂಭೀರ ಸ್ಥಿತಿಯಲ್ಲಿದರುವ ಸಹೋದರ ಸಕ್ಲೈನ್ (20)ನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ತಳಂಗರೆ ಮಾಲಿಕ್ ದಿನಾರ್ ಮಸೀದಿಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಸೀದಿ ಹಿಂಬಾಗದ ಕೆರೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಸಕ್ಲೈನ್ ನನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಫೈಝಾನ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಭಾರೀ ಮಳೆಯಿಂದ ಕೆರೆ ತುಂಬಿ ತುಳುಕುತ್ತಿತ್ತು. ಸಹೋದರ ಕೆರೆಯಲ್ಲಿ ಮುಳುಗುತ್ತಿರುವುದನ್ನು ನೋಡಿದ ಫೈಝಾನ್ ಕೆರೆಗೆ ಹಾರಿ ರಕ್ಷಿಸಲು ಯತ್ನಿಸುತ್ತಿದ್ದಾಗ ಮುಳುಗಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಫೈಝಾನ್ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಝಿಯಾರತ್ ಗಾಗಿ ಬೆಂಗಳೂರಿನಿಂದ 11 ಮಂದಿಯ ತಂಡವು ಮಂಗಳವಾರ ಮಾಲಿಕ್ ದಿನಾರ್ ಮಸೀದಿಗೆ ಆಗಮಿಸಿತ್ತು. ಇವರೆಲ್ಲರೂ ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಮರಳುವವರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj