ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ, ಕಾವೂರು ಮಹಾಶಕ್ತಿ ಕೇಂದ್ರ -2 ಇವರ ನೇತೃತ್ವದಲ್ಲಿ ಯೆಯ್ಯಾಡಿ ಶ್ರೀ ರಾಮ ಮಂದಿರದಲ್ಲಿ ಆಯೋಜನೆಯಾದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಪ್ರಾಚೀನ ಭಾರತೀಯ ಪರಂಪರೆಯನ್ನು ವಿಶ್ವಾದ್ಯಂತ ‘ಅಂತಾರಾಷ್ಟ್ರೀಯ ಯೋಗ ದಿನ’ವನ್ನಾಗಿ ಮಾಡುವ ಐತಿಹಾಸಿಕ ಕಾರ್ಯವನ್ನು ಮಾಡಿದ್ದಾರೆ. ಈ ಯೋಗ ದಿನದಂದು ಯೋಗವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿಸಲು ಪ್ರತಿಜ್ಞೆ ಮಾಡೋಣ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.