ಮೂಲ್ಕಿ: ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಲ್ಕಿ ಪೊಲೀಸರು ಚಿಕ್ಕಮಗಳೂರಿನ ತರಿಕೆರೆಯಲ್ಲಿ ಬಂಧಿಸಿದ್ದಾರೆ.
ರವಿ ನಾಯಕ್ (35) ಬಂಧಿತ ಆರೋಪಿ.
ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ವಿರುದ್ಧ ಸಕಲೇಶಪುರ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.